Monday, August 24, 2015

ಕಟೀಲಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಾಲಾ ಮಕ್ಕಳಿಂದ
ಕಟೀಲಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

katil school sasi vitarane

katil school sasi vitarane

Sunday, August 9, 2015

ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವ

ಬ್ರಾಹಣತ್ವ ಉಳಿಸಿ - ವಾದಿರಾಜ ಕೊಲಕಾಡಿ
ಕಟೀಲು : ಜಪ, ತಪ, ಪೂಜೆ ಪುನಸ್ಕಾರಗಳಿಂದ ಆಚಾರಗಳಿಂದ ವ್ರತಾನುಷ್ಟಾನಗಳಿಂದ ಬ್ರಾಹ್ಮಣತ್ವವನ್ನು ಉಳಿಸುವ ಜವಾಬ್ದಾರಿ ಇದೆ ಎಂದು ವಿದ್ವಾಂಸ  ವಾದಿರಾಜ ಕೊಲಕಾಡಿ ಹೇಳಿದರು.
ಅವರು ಭಾನುವಾರ ಕಟೀಲು ಸಾನಿಧ್ಯ ಸಭಾಭವನದಲ್ಲಿ ನಡೆದ
ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಮೂಡುಬಿದ್ರೆಯ ಉದ್ಯಮಿ ಶ್ರೀಪತಿ ಭಟ್ ಪ್ರತಿಭಾ ಪುರಸ್ಕಾರ ನೀಡಿದರು. 
ಸಾಹಿತಿ ಗಾಯತ್ರಿ ಎಸ್. ಉಡುಪರನ್ನು ಸಂಮಾನಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ ವಿತರಿಸಿದರು.
ಅಧ್ಯಕ್ಷ ಡಾ. ಶಶಿಕುಮಾರ್ ಸಂಘದ ಚಟುವಟಿಕೆಗಳ ಕುರಿತು ಮಾತನಾಡಿದರು. ಉಪಾಧ್ಯಕ್ಷ ಎಕ್ಕಾರು ಡಾ. ಪದ್ಮನಾಭ ಭಟ್ ಸ್ವಾಗತಿಸಿದರು. ಕೋಶಾಧಿಕಾರಿ ರಾಘವೇಂದ್ರ ಭಟ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ವೇದವ್ಯಾಸ ಉಡುಪ ವಂದಿಸಿದರು. ಗುರುಪ್ರಸಾದ್ ಭಟ್ ಕಾರ‍್ಯಕ್ರಮ ನಿರ್ವಹಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಟೀಲು ದೇಗುಲದಲ್ಲಿ ೧೨೨ ಮಂದಿಯಿಂದ ರಕ್ತದಾನ ಶಿಬಿರ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲದ ಆಸರೆಯಲ್ಲಿ ಕಟೀಲು ಕಾಲೇಜು ಎನ್‌ಎಸ್‌ಎಸ್, ಕಿನ್ನಿಗೋಳಿ ರೋಟರಿ, ಇನ್ನರ್ ವೀಲ್, ವೀರಮಾರುತಿ ವ್ಯಾಯಾಮ ಶಾಲೆ, ವಿಜಯ ಯುವ ಸಂಗಮ, ಆದರ್ಶ ಬಳಗ, ಕುಕ್ಕಟ್ಟೆ ಯಕ್ಷಗಾನ ಬಯಲಾಟ ಸಮಿತಿ, ಚೇತನಾ, ದುರ್ಗಾಂಬಿಕಾ ಮಂಡಲ, ನಂದಿನಿ ಬ್ರಾಹ್ಮಣ ಸಭಾ, ಸಜ್ಜನ ಬಂಧುಗಳು ಮುಂತಾದ ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ ಹಾಗೂ ವೆನ್‌ಲಾಕ್ ಆಸ್ಪತ್ರೆಗೆ ೧೨೨ ಮಂದಿ ರಕ್ತದಾನ ಮಾಡಿದರು. 
ಕಟೀಲು ದೇಗುಲ ಅರ್ಚಕ ಶ್ರೀಹರಿ ಆಸ್ರಣ್ಣ, ವೇದವ್ಯಾಸ ತಂತ್ರಿ, ಕೃಷ್ಣರಾಜ ತಂತ್ರಿ,, ಜಿ.ಪಂ.ಸದಸ್ಯ ಈಶ್ವರ ಕಟೀಲ್, ಶಾಲೆಟ್ ಪಿಂಟೋ ಉದ್ಘಾಟಿಸಿದರು. ಕೆಎಂಸಿ ಬ್ಲಡ್ ಬ್ಯಾಂಕ್‌ನ ಭವಾನಿಶಂಕರ್, ದೇಗುಲದ ಪ್ರಬಂಧಕ ವಿಜಯ ಕುಮಾರ್, ಪ್ರಾಚಾರ‍್ಯ ಎಂ. ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್‌ನ ಸುನೀತಾ, ಕೃಷ್ಣ ಕಾಂಚನ್, ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷ ಸರೋಜಿನಿ, ಉಪಾಧ್ಯಕ್ಷ ಮಾರ್ಗನ್, ಸದಸ್ಯರಾದ ಜನಾರ್ದನ ಕಿಲೆಂಜೂರು, ದಾಮೋದರ್ ಶೆಟ್ಟಿ, ರಮಾನಂದ ಪೂಜಾರಿ, ದೇವದಾಸ ಮಲ್ಯ, ವ್ಯಾಯಾಮ ಶಾಲೆಯ ಕೇಶವ ಕರ್ಕೇರ, ಜೆರಾಲ್ಡ್ ಮಿನೇಜಸ್, ನಿಶಾಂತ್ ಕಿಲೆಂಜೂರು, ರಘುನಾಥ್ ಕಾಮತ್, ಶಿಕ್ಷಕ ಗೋಪಾಲ ಶೆಟ್ಟಿ ಮುಂತಾದವರಿದ್ದರು.

Friday, July 10, 2015

ಕಟೀಲಿನಲ್ಲಿ ವಾಟ್ಸಪ್ ಗ್ರೂಪ್ ಯಕ್ಷಮಿತ್ರ ವೇದಿಕೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗೋವಿಂದ ಭಟ್, ಬಲಿಪ ನಾರಾಯಣ ಭಾಗವತ, ರಾಮ ಕುಲಾಲ್ರನ್ನು ಸಂಮಾನಿಸಲಾಯಿತು.

Friday, July 3, 2015

ಉಚಿತ ಯೋಗ ತರಬೇತಿ ಶಿಬಿರ

ವಿಶ್ವ ಯೋಗ ದಿನದ ಅಂಗವಾಗಿ ಪತಂಜಲಿ ಯೋಗ ಸಮಿತಿ ಮೂಡಬಿದಿರೆ ಸಂಯೋಜನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಒಂದು ವಾರದ ಉಚಿತ ಯೋಗ ತರಬೇತಿ ಶಿಬಿರವನ್ನು ದೇವಳದ ಮೊಕ್ತೇಸರ ವೇದಮೂರ್ತಿ ವಾಸುದೇವ ಆಸ್ರಣ್ಣರು ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ವೇದಮೂರ್ತಿ ಕಮಲಾದೇವಿ ಪ್ರಸಾದ ಆಸ್ರಣ್ಣರವರು ಆಶೀರ್ವಚನವಿತ್ತರು. ವೇದಿಕೆಯಲ್ಲಿ ಪತಂಜಲಿ ಯೋಗ ಸಮಿತಿ ಮೂಡಬಿದಿರೆ ವಲಯದ ಅಧ್ಯಕ್ಷರಾದ ಶ್ರೀ ಯು. ಪದ್ಮನಾಭ ಶೆಟ್ಟಿ, ಸಂಸ್ಥೆಯ ಪ್ರಾಚಾರ‍್ಯರಾದ ಪ್ರೊ. ಜಯರಾಮ ಪೂಂಜ ಹಾಗೂ ಯೋಗ ಮತ್ತು ನೈತಿಕ ಶಿಕ್ಷಣದ ನಿರ್ದೇಶಕರಾದ ಶ್ರೀ ಶಂಕರ ಮರಾಠೆ ಹಾಗೂ ಡಾ| ಕೇಶವ ಹೆಗ್ಡೆಯವರು ಉಪಸ್ಥಿತರಿದ್ದರು. ಬಾಬಾ ರಾಮ್‌ದೇವ್‌ಜೀರವರ ಶಿಷ್ಯರಾದ ಶ್ರೀ ಶರತ್ ಮತ್ತು ಶ್ರೀ ಹರಿಪ್ರಸಾದ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಸಂಸ್ಥೆಯ ವಿದ್ಯಾರ್ಥಿಗಳು ಯೋಗತರಬೇತಿ ಕಾರ‍್ಯಾಗಾರದಲ್ಲಿ ಭಾಗವಹಿಸುವುದರೊಂದಿಗೆ ಯೋಗದ ಮಹತ್ವವನ್ನು ಪಡೆದುಕೊಂಡರು.
ಸಂಸ್ಥೆಯ ಪ್ರಾಚಾರ‍್ಯ ಸ್ವಾಗತಿಸಿ, ಉಪನ್ಯಾಸಕರಾದ ಡಾ| ಕೇಶವ ಹೆಗ್ಗಡೆಯವರು ಧನ್ಯವಾದವಿತ್ತರು. ಶ್ರೀಯುತ ಶಂಕರ ಮರಾಠೆಯವರು ಕಾರ‍್ಯಕ್ರಮ ನಿರ್ವಹಿಸಿದರು.

ನೂತನ ಗೋಶಾಲೆ ಕಾಮಧೇನು

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ನೂತನ ಗೋಶಾಲೆ ಕಾಮಧೇನು ಉದ್ಘಾಟನೆಗೊಂಡಿತು. ಅನಂತ ಆಸ್ರಣ್ಣ, ಹರಿ ಆಸ್ರಣ್ಣ ಪ್ರಸಾದ ಆಸ್ರಣ್ಣ ವೇದವ್ಯಾಸ ತಂತ್ರಿ ವಿಜಯಕುಮಾರ್ ಮತ್ತಿತ್ತರರಿದ್ದರು. ಕಟೀಲು ಮಾಂಜದಲ್ಲಿ  ಈಗಾಗಲೇ ಏಳು ಎಕರೆಯಲ್ಲಿ ನಂದಿನಿ ಗೋಶಾಲೆ ನಡೆಯುತ್ತಿದೆ.

Wednesday, July 1, 2015

ಕಟೀಲು ಕಾಲೇಜು ಎನ್‌ಎಸ್‌ಎಸ್ ಉದ್ಘಾಟನೆ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೇ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಈ ಸಾಲಿನ ಚಟುವಟಿಕೆಗಳ ಉದ್ಘಾಟನೆಯನ್ನು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡುವ ಮೂಲಕ ಕೆಂಚನಕೆರೆಯ ಯೋಗಸಾಧಕ ಜಯ ಶೆಟ್ಟಿಯವರು ಉದ್ಘಾಟಿಸಿದರು.
ಯೋಗದಿಂದ ಅನಾರೋಗ್ಯವನ್ನು ದೂರಮಾಡಬಹುದು. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕೆಂದು ಜಯ ಶೆಟ್ಟಿ ಹೇಳಿದರು.
ಪ್ರಾಚಾರ್ಯ ಎಂ. ಬಾಲಕೃಷ್ಣ ಶೆಟ್ಟಿ, ಕಿನ್ನಿಗೋಳಿಯ ಉದ್ಯಮಿ ಶ್ರೀಕಾಂತ್, ಎನ್‌ಎಸ್‌ಎಸ್ ಯೋಜನಾಧಿಕಾರಿ ಕೃಷ್ಣ ಕಾಂಚನ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಪವಿತ್ರ ಕಾರ‍್ಯಕ್ರಮ ನಿರೂಪಿಸಿದರು. ಯಶ್ವಿತಾ ವಂದಿಸಿದರು.