ಇಲ್ಲಿನ ಪುರಾಣ ಪ್ರಸಿದ್ಧ ಭ್ರಾಮರೀ ಶ್ರೀ ದುರ್ಗಾಪರಮೇಶ್ವರೀ ದೇಗುಲದ ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಡಾ.ಎನ್.ಎಸ್. ಚನ್ನಪ್ಪ ಗೌಡ, ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ, ಆಡಳಿತಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ, ಪ್ರಬಂಧಕ ವಿಶ್ವೇಶ್ವರ ರಾವ್, ಧಾರ್ಮಿಕ ದತ್ತಿ ಇಲಾಖೆಯ ಎ.ಆರ್. ಪ್ರಭಾಕರ್, ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ನಿರ್ಮಿತಿ ಕೇಂದ್ರದ ರಾಜೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ, ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆಯಿತು.ಕಳೆದ ಫೆಬ್ರವರಿಯಲ್ಲಿ ದೇಗುಲಕ್ಕೆ ಭೇಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ನಂದಕುಮಾರ್ ಸೂಚಿಸಿರುವ ಕಾರ್ಯಗಳ ಬಗ್ಗೆ ಪ್ರಮುಖ ಚರ್ಚೆ ನಡೆಯಿತು.ದೇಗುಲದ ಒಳಗೆ ಶುಚಿತ್ವ, ಏರ್ಕೂಲರ್ ಅಳವಡಿಕೆ, ಉಗ್ರಾಣದಲ್ಲಿರುವ ಹಳೆಯ ಸ್ಟೀಮ್ ಬಾಯ್ಲರ್ಗಳ ರಿಪೇರಿ, ಭೋಜನ ಶಾಲೆಯಲ್ಲಿ ಹೆಚ್ಚು ಮಂದಿಗೆ ಅವಕಾಶ ಇರುವಂತೆ ಬದಲಾವಣೆ ಕಾರ್ಯ, ನದಿಯ ನೀರಿನಿಂದ ದೇಗುಲಕ್ಕೆ ವಿದ್ಯುತ್ ತಯಾರಿ, ಬಾಡಿಗೆ ಅಂಗಡಿದಾರರನ್ನು ಬಸ್ನಿಲ್ದಾಣದಲ್ಲಿರುವ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವುದು, ಪ್ರವಾಸೋದ್ಯಮ ಇಲಾಖೆಯಿಂದ ಅರ್ಧಕ್ಕೇ ನಿಂತಿರುವ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸುವುದು, ಗೋಶಾಲೆಯ ದುರಸ್ತಿ ಹೀಗೆ ಮೂವತ್ತೈದಕ್ಕೂ ಹೆಚ್ಚು ವಿಚಾರಗಳು ಚರ್ಚಿತವಾದವು. ಮಾಸ್ಟರ್ ಪ್ಲಾನ್ನಲ್ಲಿ ಅಳವಡಿಕೆಯಾಗುವ ಡ್ರೈನೇಜ್, ಉದ್ಯಾನವನ ಇತ್ಯಾದಿಗಳ ವಿವರವನ್ನು ಅಧಿಕಾರಿಗಳು ನೀಡಿದರು.
Thursday, July 28, 2011
ಕಟೀಲು ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ
ಕಟೀಲು : ೯೫ ವರ್ಷಗಳ ಇತಿಹಾಸದ ೩೨೪ವಿದ್ಯಾರ್ಥಿಗಳು ಕಲಿಯುತ್ತಿರುವ ಕಟೀಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಒಂದನೇ ಮಹಡಿಯನ್ನು ಸಾಂಸದ ನಳಿನ್ ಕುಮಾರ್ ಗುರುವಾರ ಉದ್ಘಾಟಿಸಿದರು. ತನ್ನ ಸಾಂಸದರ ಅನುದಾನದಿಂದ ರೂ.೪ಲಕ್ಷವನ್ನು ಶಾಲೆಯ ಎದುರಿನ ಇಂಟರ್ಲಾಕ್ ಕಾಮಗಾರಿಗೆ ನೀಡುವುದಾಗಿ ತಿಳಿಸಿದ ನಳಿನ್ ಕುಮಾರ್ ಕನ್ನಡ ಶಾಲೆಗಳಲ್ಲಿ ವ್ಯವಸ್ಥೆಗಳು ಚೆನ್ನಾದಾಗ ವಿದ್ಯಾರ್ಥಿಗಳನ್ನು ಸೆಳೆಯಲು ಸಾಧ್ಯವೆಂದರು.ಜಿಲ್ಲಾಧಿಕಾರಿ ಡಾ.ಎನ್.ಎಸ್. ಚನ್ನಪ್ಪ ಗೌಡ ಮಾತನಾಡಿ, ಕಟೀಲು ದೇಗುಲದಿಂದಲೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪ್ರವಾಸದ ವ್ಯವಸ್ಥೆ ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.ಕರಾವಳಿಯಲ್ಲಿ ಉಚಿತ ಊಟ, ಶಿಕ್ಷಣ ನೀಡುವ ವ್ಯವಸ್ಥೆ ಇರುವುದು ಕಟೀಲಿನಲ್ಲಿ ಮಾತ್ರ ಎಂದು ಶಾಸಕ ಅಭಯಚಂದ್ರ ಹೇಳಿದರು.ಕಟೀಲಿನ ಆನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ದೇಗುಲದ ಆಡಳಿತಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ, ಜಿ.ಪಂ.ಸದಸ್ಯ ಈಶ್ವರ, ತಾ.ಪಂ.ಸದಸ್ಯೆ ಬೇಬಿ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ದೈಹಿಕ ಶಿಕ್ಷಣದ ಎನ್.ಎಸ್.ಅಂಗಡಿ ಮತ್ತಿತರರಿದ್ದರು.ಪ್ರಸ್ತಾವನೆಗೈದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಸುಮಾರು ೧೮ಲಕ್ಷ ರೂ.ವೆಚ್ಚದಲ್ಲಿ ಶಾಲೆಗೆ ಸಭಾಭವನ ನಿರ್ಮಿಸಲಾಗುವುದು ಎಂದರು.ಮುಖ್ಯ ಶಿಕ್ಷಕಿ ವೈ.ಮಾಲತಿ ಸ್ವಾಗತಿಸಿದರು. ವಾಸುದೇವ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಗೋಪಾಲ್ ವಂದಿಸಿದರು.
Saturday, July 23, 2011
ವ್ಯಕ್ತಿತ್ವ ವಿಕಸನ
Friday, July 22, 2011
ನಿಡ್ಡೋಡಿ ಐಟಿಐನಲ್ಲಿ ಬೀಳ್ಕೊಡುಗೆ
ಕನಸು, ಗುರಿಗಳನ್ನು ಸಾಧಿಸುವ ಪ್ರಯತ್ನ ಇದ್ದಾಗ ಯಶಸ್ಸು ಕೂಡ ಸುಲಭ ಎಂದು ಕಟೀಲು ಸಮೀಪದ ನಿಡ್ಡೋಡಿ ಶ್ರೀ ದುರ್ಗಾದೇವಿ ಕೈಗಾರಿಕಾ ಸಂಸ್ಥೆಯ ಸ್ಥಾಪಕಾಧ್ಯಕ್ಷ ಭಾಸ್ಕರ ದೇವಸ್ಯ ಹೇಳಿದರು. ಅವರು ೨೦೦೯-೧೧ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಸಂಸ್ಥೆಯ ಗೌರವಾಧ್ಯಕ್ಷ ಎಂ.ಆರ್. ಜೈನ್, ಸಂಸ್ಥೆಯ ಪ್ರಥಮ ಬ್ಯಾಚ್ಗೆ ನೂರು ಶೇಕಡಾ ಉದ್ಯೋಗಾವಕಾಶ ನೀಡಲಾಗಿದೆ ಎಂದರು. ಭಾರತ್ ಎಗ್ರೋವೇಟ್ ಇಂಡಸ್ಟ್ರೀಸ್ನ ಆಡಳಿತ ನಿರ್ದೇಶಕ ಡಾ.ಅರುಣ್ ಕುಮಾರ್ ರೈ, ದುರ್ಗಾದೇವಿ ಇಂಗ್ಲಿಷ್ ಮಾಧ್ಯಮ ಶಾಲೆಯ ಸಂಚಾಲಕ ರಾಮಣ್ಣ ಗೌಡ, ಸಂಗೀತಾ ಭಾಸ್ಕರ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯೆ ಅನುರಾಧಾ ಎಸ್. ಸಾಲಿಯಾನ್ ಸ್ವಾಗತಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸುನೀತಾ ಶೆಟ್ಟಿ ವಂದಿಸಿದರು.
Tuesday, July 19, 2011
ಕ್ರೀಡಾ ಪರಿಕರ ಹಸ್ತಾಂತರ
ಕಟೀಲಿನಲ್ಲಿ ಉಚಿತ ಕಂಪ್ಯೂಟರ್ ತರಬೇತಿ
Saturday, July 16, 2011
ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ೯೫ವರ್ಷಗಳ ಕಟೀಲು ಹಿರಿಯ ಪ್ರಾಥಮಿಕ ಶಾಲೆ
Friday, July 15, 2011
ಅಯೋಗ್ಯರಿಲ್ಲ -ಹರಿ ಆಸ್ರಣ್ಣ
ಸೈಕಲ್ ವಿತರಣೆ
Thursday, July 14, 2011
ಕ್ಲಸ್ಟರ್ ಸಹಪಠ್ಯಚಟುವಟಿಕೆ
ಸಾಂಸದರ ಭೇಟಿ
ಆಲಿಸುವುದೂ ಕಲೆ- ಸುಲೋಚನಾ ಕೊಡವೂರು
ಪಾಠ, ಮಾತು ಹೀಗೆ ಮತ್ತೊಬ್ಬರು ಹೇಳುವುದನ್ನು ಕೇಳುವುದು ಮಾತ್ರವಲ್ಲ ಆಲಿಸುವುದೂ ಕೂಡ ಒಂದು ಕಲೆಯಂತೆ ಎಂದು ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಂಚಾಲಕಿ ಸುಲೋಚನಾ ಕೊಡವೂರು ಹೇಳಿದರು.ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯಲ್ಲಿ ಕಿನ್ನಿಗೋಳಿ ರೋಟರ್ಯಾಕ್ಟ್ ಕ್ಲಬ್ ಆಯೋಜಿಸಿದ ಜೀವನ ಕೌಶಲ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ದಿನೇಶ್ ಕೊಡಿಯಾಲ್ಬೈಲ್ ಏಕಾಗ್ರತೆ, ವ್ಯಕ್ತಿತ್ವ ವಿಕಸನ ಕುರಿತು ಮಾಹಿತಿ ನೀಡಿದರು.ಉಪಪ್ರಾಚಾರ್ಯ ಸುರೇಶ್ ಭಟ್, ರೋಟರ್ಯಾಕ್ಟ್ನ ಗಣೇಶ್ ಕಾಮತ್, ಕೆ.ಬಿ.ಸುರೇಶ್, ಜಾಕ್ಸನ್ ಪಕ್ಷಿಕೆರೆ ಉಪಸ್ಥಿತರಿದ್ದರು.
ಮಾದಕ ದ್ರವ್ಯಗಳಿಂದ ದೂರವಿರಿ- ಉಮೇಶ್ ರಾವ್ ಎಕ್ಕಾರು
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲ ಪದವಿ ಕಾಲೇಜಿನಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿ.ಪಂ.ಸದಸ್ಯ ಈಶ್ವರ, ಧನಂಜಯ ಶೆಟ್ಟಿಗಾರ್, ಪ್ರಾಚಾರ್ಯ ಬಾಲಕೃಷ್ಣ ಶೆಟ್ಟಿ, ಎನ್ಎಸ್ಎಸ್ನ ಕೃಷ್ಣ ಕಾಂಚನ್, ಕೇಶವ ಎಚ್, ಲತಾ ಅಮೀನ್, ಭುವನಾಭಿರಾಮ ಉಡುಪ ಮತ್ತಿತರರಿದ್ದರು.