Monday, March 31, 2014

ಸುರೇಶ್ ಭಟ್ ಬೀಳ್ಕೊಡುಗೆ

ಕಟೀಲು ಪ್ರೌಢಶಾಲೆಯಲ್ಲಿ ಉಪಪ್ರಾಚಾರ್ಯರಾಗಿದ್ದ ಸುರೇಶ್ ಭಟ್ ನಿವೃತ್ತರಾದ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸುರೇಶ ಭಟ್ ಮತ್ತು ಪತ್ನಿ ಶಿಕ್ಷಕಿ ಮಂಗಳಾ ಎಸ್ ಭಟ್‌ರನ್ನು ಸಂಮಾನಿಸಲಾಯಿತು. ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಟೀಲು ಪದವಿ ಕಾಲೇಜು ಪ್ರಾಚಾರ್ಯ ಬಾಲಕೃಷ್ಣ ಶೆಟ್ಟಿ, ಪ್ರಾಥಮಿಕ ಶಾಲೆಯ ಮಾಲತಿ ವೈ, ಕೆ.ವಿಶೆಟ್ಟಿ, ಸಾಯಿನಾಥ ಶೆಟ್ಟಿ ಮತ್ತಿತರರಿದ್ದರು.

Sunday, March 9, 2014

ಕೊಡೆತ್ತೂರು ಅರಸುಕುಂಜರಾಯ ದೈವಸ್ಥಾನದಲ್ಲಿ ನೇಮ

ಕಿನ್ನಿಗೋಳಿ ಕೊಡೆತ್ತೂರು ಅರಸುಕುಂಜರಾಯ ದೈವಸ್ಥಾನದಲ್ಲಿ ಒಲಿಮದೆಯಿಂದ ಹೊರಬರುವ ಕುಂಜರಾಯ ಉಳ್ಳಾಯ ದೈವದ ನೇಮ ಜಾರಂದಾಯ, ಕಾಂತೇರಿಜುಮಾದಿ, ಸರಳ ಧೂಮಾವತಿ, ಕೊಡಮಣಿತ್ತಾಯ ದೈವಗಳ ಸಹಿತ ನಡೆಯಿತು.
ಚಿತ್ರ : ಅರುಣ್ ಉಲ್ಲಂಜೆ